ನಿವೇಶನ ಅಕ್ರಮ ಖರೀದಿ ಆರೋಪ: ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್ಐಆರ್
ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದ ಪೊಲೀಸ್ ಕಮಿಷನರ್ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್
ಆರ್ಟಿಐ ಕಾರ್ಯಕರ್ತ ಎನ್.ಗಂಗರಾಜು ಅವರು ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.
ಮೈಸೂರು: ನಿವೇಶನ ಅಕ್ರಮ ಖರೀದಿ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಯಲಿದೆ. ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.
-ಪೊಲೀಸ್ ಕಮಿಷನರ್ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್
ಸಿದ್ದರಾಮಯ್ಯ, ಅಂದಿನ ಸಿಟಿ ಇಂಪ್ರೂವ್ಮೆಂಟ್ ಟ್ರಸ್ಟ್ ಬೋರ್ಡ್ (ಸಿಐಟಿಬಿ) ಅಧ್ಯಕ್ಷ ಸಿ.ಬಸವೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಾಜಿ ಅಧ್ಯಕ್ಷ ಡಿ.ಧ್ರುವಕುಮಾರ್, ಆಯುಕ್ತ ಪಿ.ಎಸ್.ಕಾಂತರಾಜು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರ್ತ ಎನ್.ಗಂಗರಾಜು ಅವರು ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಪರಿಶೀಲನೆ ನಡೆಸಿದ್ದ 2ನೇ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯವು ದೂರು ದಾಖಲಿಸಿಕೊಂಡು ತನಿಖೆ ನಡೆಸಿ ವರದಿ ನೀಡುವಂತೆ ಜೂನ್ 4ರಂದು ಪೊಲೀಸರಿಗೆ ಸೂಚನೆ ನೀಡಿತ್ತು.
ಡೀನೋಟಿಫೈ ಮಾಡಿದ್ದ ಜಾಗವನ್ನು ಖರೀದಿಸಿ, ಜಾಗ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿದ ಆರೋಪ ಸಿದ್ದರಾಮಯ್ಯ ಅವರ ಮೇಲಿದೆ. ಭೂ ಮಾಲೀಕರಿಗೆ ಬದಲಿ ನಿವೇಶನ ನೀಡುವಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.